For the best experience, open
https://m.samyuktakarnataka.in
on your mobile browser.

visibility ಸಮಸ್ಯೆಗೊಂದು ಪರ್ಮನೆಂಟ್ ಪರಿಹಾರ

02:02 PM Dec 17, 2023 IST | Samyukta Karnataka
visibility ಸಮಸ್ಯೆಗೊಂದು ಪರ್ಮನೆಂಟ್ ಪರಿಹಾರ

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉಂಟಾಗಿರುವ visibility ಸಮಸ್ಯೆಗೊಂದು ಪರ್ಮನೆಂಟ್ ಪರಿಹಾರಕ್ಕೆ ಕೇಂದ್ರ ವಿಮಾನಯಾನ ಸಚಿವರಿಗೆ ಮನವಿ ಮಾಡಿರುವದಾಗಿ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಹಿತ ಪೋಸ್ಟ್‌ ಮಾಡಿರುವ ಅವರು ಚಳಿಗಾಲದ ಮಂಜಿನಿಂದಾಗಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉಂಟಾಗಿರುವ visibility ಸಮಸ್ಯೆಗೊಂದು ಪರ್ಮನೆಂಟ್ ಪರಿಹಾರವನ್ನು ಆದಷ್ಟು ಬೇಗ ಒದಗಿಸಿಕೊಡಬೇಕು ಎಂದು ನಾನು ಈಗಾಗಲೇ ಕೇಂದ್ರ ವಿಮಾನಯಾನ ಸಚಿವರಿಗೆ ಮನವಿ ಮಾಡಿಕೊಂಡಿದ್ದೇನೆ. ಒಂದೆರಡು ಸಣ್ಣಪುಟ್ಟ ಸಮಸ್ಯೆಗಳನ್ನು ಪರಿಹರಿಸಿಕೊಂಡರೆ ಈ ಏರ್ ಪೋರ್ಟ್ ಆದಷ್ಟು ಬೇಗ ಅಂತಾರಾಷ್ಟ್ರೀಯ ಮಟ್ಟದ ನಿಲ್ದಾಣವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದಿದ್ದಾರೆ.